Published
7 hours agoon
By
Akkare News
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡ ಮತದಾನದ ಹಿಂದೆ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ರಹಸ್ಯ ಸಭೆ ಇದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.
“ಈ ವಿಷಯ ತಿಳಿದ ಕೂಡಲೇ ನಾನು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ಗೆ ಕರೆ ಮಾಡಿದೆ. ಅವರು ಸಂಪರ್ಕಕ್ಕೆ ಸಿಗಲಿಲ್ಲ. ಆ ಬಳಿಕ ರಾಜ್ಯ ಪ್ರಧಾನ ಕಾರ್ಯದರ್ಶಿಯೊಬ್ಬರಿಗೆ ಕರೆ ಮಾಡಿ ಮಾಹಿತಿ ಹಂಚಿಕೊಂಡೆ. ಅವರಿಗೆ ಈ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳುವಂತೆಯೂ ಮನವಿ ಮಾಡಿದೆ. ಆ ಬಳಿಕ ಮತ್ತೊಂದು ಸಭೆಯೂ ನಡೆಯಿತು. ಆ ಸಭೆಯ ಮಾಹಿತಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯವರಿಗೆ ನೀಡಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಎಚ್ಚರಿಕೆ ವಹಿಸಲಿಲ್ಲ ” ಎಂದು ತಿಳಿಸಿದರು.