Published
2 months agoon
By
Akkare News
ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಗ್ಯಾರಂಟಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಸದ್ಯ ಗ್ಯಾರಂಟಿ ಪರಿಷ್ಕರಣೆ ನಡೆಸುತ್ತಿದೆ. ನಡುವೆ ಸರ್ಕಾರಿ ನೌಕರರನ್ನು ಗ್ಯಾರಂಟಿ ಯೋಜನೆಗಳಿಂದ ಹೊರಗಿಡಲು ಚಿಂತನೆ ನಡೆಸಿದ್ದು, ಎಲ್ಲ ಸರ್ಕಾರಿ ನೌಕರರನ್ನು ಗೃಹಜ್ಯೋತಿ ಯೋಜನೆಯಿಂದಲೂ ಹೊರಗಿಡುವ ಚಿಂತನೆ ನಡೆಸುತ್ತಿದೆ.
ಹೌದು, ಈವರೆಗೂ ಪ್ರತಿಯೊಬ್ಬ ಸರ್ಕಾರಿ ನೌಕರರಿಗೂ ಗೃಹಜ್ಯೋತಿ ಯೋಜನೆ ಸೌಲಭ್ಯ ಸಿಗುತ್ತಿದೆ. ಇದು ಕೇವಲ ಆದಾಯ ಅಥವಾ ಉದ್ಯೋಗದ ಆಧಾರದ ಮೇಲೆ ನಿರ್ಧಾರವಾಗಿಲ್ಲದೆ ಎಲ್ಲರಿಗೂ ಕೊಡಲಾಗುತ್ತಿದೆ.



ಇದಕ್ಕೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಪ್ರತಿಕ್ರಿಯೆ ನೀಡಿದ್ದು, ಗ್ಯಾರಂಟಿ ಪ್ರಾಧಿಕಾರ ನಮ್ಮ ಬಳಿ ಚರ್ಚೆ ಮಾಡಿದರೆ ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಗ್ಯಾರಂಟಿ ಕೊಡಿ ಅಂತಾ ನಾವು ಕೇಳಿರಲಿಲ್ಲ, ಅವರೇ ಕೊಟ್ಟಿದ್ದಾರೆ. ಈಗ ವಾಪಸ್ ತೆಗೆದುಕೊಳ್ಳುತ್ತೇವೆ ಅಂತಿದ್ದಾರೆ. ಗೃಹಜ್ಯೋತಿ ಯೋಜನೆಯಿಂದ ನೌಕರರಿಗೆ ಅನುಕೂಲ ಆಗುತ್ತಿದೆ. ನಮ್ಮ ಬಳಿ ಚರ್ಚೆ ಮಾಡಿದಾಗ ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದಿದ್ದಾರೆ.


