Published
9 hours agoon
By
Akkare News
ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ ವಿವಿಧ ಜಿಲ್ಲೆಗಳಿಗೆ ಸೇರಿದ ಶ್ರೀರಾಗ್, ಅತುಲ್, ಮಿಥುನ್ಲಾಲ್, ಅಜೀರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಕೊಡಗಿನ ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್, ಜಮೀರ್ ಅಲಿಕಾ ಎಂಬವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಾರಣ ಆರೋಪಿಗಳ ಬಂಧನಕ್ಕೆ ಸಹರಿಸುವಂತೆ ಮಂಗಳೂರು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ನೀಡಲಾಗುವುದು. ಅವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.
ಜೂನ್ 29 ರ ನಸುಕಿನಲ್ಲಿ ಮಂಗಳೂರಿನ ಬೈಕಂಪಾಡಿ ಬಳಿಯ ಹೆದ್ದಾರಿ ಮಧ್ಯೆ ಕಾರಿನಲ್ಲಿ ಬರುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿತ್ತು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಸಹಕರಿಸಿದ ಮೂವರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲಕ್ಕೇರಿ ಮೂಲದ ನಿಮಿಲ್, ಮಡಿಕೇರಿ ಮೂಲದ ಇರ್ಷಾದ್ ಮತ್ತು ಮುಸ್ತಾಫ ಎಂಬವರನ್ನು ಬಂಧಿಸಿದ್ದರು. ಕಾರಿನಲ್ಲಿ ಬರುತ್ತಿದ್ದ ಪಯ್ಯನ್ನೂರು ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಮೇಲೆ ಹಲ್ಲೆಗೈದು 180 ಗ್ರಾಂ ಚಿನ್ನ ಸಹಿತ 23 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದರು.
ಚಿನ್ನದ ವ್ಯಾಪಾರಿಯ ದರೋಡೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 14 ಆರೋಪಿಗಳ ಛಾಯಾಚಿತ್ರಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದು, ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಲು ಸಹಾಯ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗ್ಯಾಂಗ್ ಅನ್ನು ಗುರುತಿಸಲಾಗಿದ್ದು, ಅವರನ್ನು ಬಂಧಿಸಲು ಕೇರಳ ಮತ್ತು ಕೊಡಗಿನಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಪುದುಚೇರಿ ಮೂಲದ ಶಿಬಿನ್ ಗಂಗಾಧರನ್ ಈ ದರೋಡೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ನಂಬಲಾಗಿದೆ.