Published
3 hours agoon
By
Akkare News
ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಮುಗಿದಿದ್ದು ಆಡಳಿತಾಧಿಕಾರಿಗಳ ಮೂಲಕ ಸ್ಥಳೀಯ ಸಂಸ್ಥೆಗಳ ಆಡಳಿತ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನಾಡಳಿತ ಆರಂಭಿಸಲು ಸರ್ಕಾರ ಕ್ರಿಯಾಶೀಲವಾಗಿದ್ದು, ಈಗಾಗಲೇ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿಯಂತಹ ಪ್ರಕ್ರಿಯೆಗಳು ಸಾಗುತ್ತಿವೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸಚಿವ ಎಚ್ಡಿಕೆಗೆ ತಿರುಗೇಟು!.. ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ತಿರುಗೇಟು ನೀಡಿದ ಸಚಿವ ಖಂಡ್ರೆ, ಅಭಿವೃದ್ಧಿ ವಿಚಾರದಲ್ಲಿ ತಾವು ಎಂದಿಗೂ ಹಿತಾಸಕ್ತಿ ಅಥವಾ ರಾಜಕೀಯ ಮಾಡಿಲ್ಲ ಮತ್ತು ಕುಮಾರಸ್ವಾಮಿ ಅವರ ಮೇಲೆ ಯಾವುದೇ ವೈಯಕ್ತಿಕ ದ್ವೇಷವೂ ಇಲ್ಲ ಎಂದರು. ಹೆಚ್ಎಂಟಿ ಭೂಮಿಯ ಬಳಕೆ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಅನುಮೋದನೆಯಾಗಲೀ ಅಥವಾ ಅಂದಿನ ಅರಣ್ಯ ಸಚಿವರ ಪರವಾನಗಿಯಾಗಲೀ ಇರಲಿಲ್ಲ. ಈ ಕಾರಣಕ್ಕಾಗಿಯೇ ಸರ್ಕಾರಿ ಅರಣ್ಯ ಭೂಮಿಯನ್ನು ಹಿಂಪಡೆಯಲು ತಾವು ಸೂಚನೆ ನೀಡಿದ್ದಾಗಿ ತಿಳಿಸಿದರು.







