Published
13 hours agoon
By
Akkare News
ಉಪ್ಪಿನಂಗಡಿ ಜುಲೈ 16 : ಖಾಸಗಿ ಬಸ್ಗಳ ನಡುವಿನ ಟೈಮಿಂಗ್ಸ್ ವಿಚಾರಕ್ಕೆ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ಸಿನೊಳಗೇ ನುಗ್ಗಿದ ಮತ್ತೊಂದು ಬಸ್ ನ ನಿರ್ವಾಹಕನೊಬ್ಬ ಕಬ್ಬಿಣದ ರಾಡ್ನಿಂದ ಮತ್ತೊಬ್ಬ ನಿರ್ವಾಹಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದು, ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ನಿರ್ವಾಹಕರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.
ಮಂಗಳೂರು-ಉಪ್ಪಿನಂಗಡಿ ಮಾರ್ಗದ ‘ಅರಾಫಾ’ ಬಸ್ ನಿರ್ವಾಹಕ ನೌಶಾದ್ ಹಾಗೂ ‘ಲಕ್ಷ್ಮೀ’ ಬಸ್ ನಿರ್ವಾಹಕ ಖಲಂದರ ಯಾನೆ ಶಾಹೀದ್ ಪರಸ್ಪರ ಹಲ್ಲೆ ಮಾಡಿಕೊಂಡವರು ಮಂಗಳವಾರ ಸಂಜೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಉಭಯ ಬಸ್ಗಳ ನಡುವೆ ಟೈಮಿಂಗ್ಸ್ ವಿಚಾರವಾಗಿ ತೀವ್ರ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ‘ಲಕ್ಷ್ಮೀ’ ಬಸ್ಸಿನೊಳಗೆ ಪ್ರಯಾಣಿಕರು ಕುಳಿತಿದ್ದಾಗಲೇ ಕೆರಳಿದ ಅರಾಫಾ ಬಸ್ ನಿರ್ವಾಹಕ ನೌಶಾದ್ ಏಕಾಏಕಿ ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ಒಳನುಗ್ಗಿದ್ದಾನೆ.





