Published
2 hours agoon
By
Akkare News
ಸರ್ಕಾರದ ಪರವಾಗಿ ಉಚ್ಚ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳಲಿದ್ದು, ಅವರ ನೇಮಕಕ್ಕೆ ಕಾನೂನು ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಚಿದಾನಂದ ಬಂಗೇರ ಅವರು ಎಸ್ಡಿಎಂ ಕಾನೂನು ಮಹಾವಿದ್ಯಾಲಯದಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದು, ಹಲವು ವರ್ಷಗಳಿಂದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾನೂನು ಜ್ಞಾನ, ಸಮರ್ಥ ವಾದ ಮಂಡನೆ, ವೃತ್ತಿಪರ ನಿಷ್ಠೆ ಹಾಗೂ ಪ್ರಾಮಾಣಿಕ ಸೇವಾ ಮನೋಭಾವದಿಂದ ಅವರು ಉತ್ತಮ ಹೆಸರು ಗಳಿಸಿದ್ದಾರೆ.