Published
13 hours agoon
By
Akkare News
ಸ್ಕೌಟ್ಸ್ ದಳ ನಾಯಕರು ತಾವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ಸಲ್ಲಿಸಿದ ಪ್ರಾಮಾಣಿಕ ಸೇವೆ ಹಾಗೂ ನಾಯಕತ್ವಕ್ಕೆ ಪೂರಕವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀ ಮುರಳಿಕೃಷ್ಣ. ಪಿ ಇವರಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರ, ಕಾರ್ಯದರ್ಶಿಗಳಾದ ಶ್ರೀಯುತ ಕೃಷ್ಣಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಶ್ರೀಯುತ ಹರೀಶ್ ಪುತ್ತೂರಾಯ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರಾದ ಶ್ರೀಯುತ ಪ್ರಸನ್ನ.ಕೆ ಇವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.



