Published
1 hour agoon
By
Akkare News
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.



