Published
3 hours agoon
By
Akkare News

ಬೆಂಗಳೂರು ನಗರದ ಪ್ರಮುಖ ರಸ್ತೆಗಳು, ಮೇಲ್ಸೇತುವೆಗಳು, ಪಾದಚಾರಿ ಮಾರ್ಗಗಳು ಹಾಗೂ ಸಾರ್ವಜನಿಕ ಸ್ಥಳಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ. ಸಾರ್ವಜನಿಕರ ಸಹಕಾರದೊಂದಿಗೆ ತ್ಯಾಜ್ಯ ಮುಕ್ತ ಬೆಂಗಳೂರನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ.
ಈ ವೇಳೆ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಎಸ್.ಆರ್ ವಿಶ್ವನಾಥ್ ಹಾಗೂ ಶ್ರೀ ಎ.ಸಿ ಶ್ರೀನಿವಾಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.




