Published
2 months agoon
By
Akkare News
ಆದರೆ ಪ್ರಸ್ತುತ ದೇವಸ್ಥಾನದ ಅಭಿವೃದ್ಧಿ ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನೆಗಳು ರೂಪುಗೊಳ್ಳುತ್ತಿರುವ ಬಗ್ಗೆ ತಿಳಿದುಬರುತ್ತಿದೆ. ಇಂತಹ ಮಹತ್ವದ ಯೋಜನೆಗಳನ್ನು ಭಕ್ತರೊಂದಿಗೆ ಸಮಾಲೋಚನೆ ನಡೆಸದೆ ಹಾಗೂ ಅವರ ಅಭಿಪ್ರಾಯಗಳನ್ನು ಪಡೆದುಕೊಳ್ಳದೆ ರೂಪಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಭಕ್ತರಲ್ಲಿ ವ್ಯಕ್ತವಾಗುತ್ತಿದೆ. ದೇವಸ್ಥಾನದಂತಹ ಸಾರ್ವಜನಿಕ ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳು ಪಾರದರ್ಶಕವಾಗಿ ಹಾಗೂ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ನಿರ್ಣಯದ ಮೂಲಕ ಕೈಗೊಳ್ಳುವುದು ಅತ್ಯಗತ್ಯವಾಗಿದೆ.