Connect with us

ಇತ್ತೀಚಿನ ಸುದ್ದಿಗಳು

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌.. ಅಲೆದಾಟದ ರಿಸ್ಕ್‌ಗೆ ಬ್ರೇಕ್‌

Published

on

ರಾಜ್ಯದಲ್ಲಿ ಇದೀಗ ಅನರ್ಹ ಪಡಿತರ ಚೀಟಿದಾರರನ್ನ ಪತ್ತೆಹಚ್ಚುವ ಕಾರ್ಯದಲ್ಲಿದೆ. ಈ ನಡುವೆಯೇ ಆಹಾರ ಇಲಾಖೆಯೂ ರೇಷನ್‌ ಕಾರ್ಡ್‌ದಾರರಿಗೆ ಇ-ಕೆವೈಸಿ ಸಂಬಂಧ ಶುಭ ಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿದಾರರಿಗೆ ತೊಂದರೆ ಗದಂತೆ ಕಡ್ಡಾಯ ಇ-ಕೆವೈಸಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ನೂತನ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಿದೆ. ಇದರಿಂದಾಗಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವ ಹಾಗೂ ಸರ್ವರ್ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುವ ಕಿರಿಕಿರಿಯಿಂದ ಸಂಪೂರ್ಣ ಮುಕ್ತಿ ನೀಡಿದೆ. ಈ ಯೋಜನೆಯ ಮುಖ್ಯ ಉದ್ದೇಶ ಏನು? ಪ್ರಸ್ತುತ ಮೊಬೈಲ್ ಅಪ್ಲಿಕೇಶನ್ ಮೂಲಕ ಕೇವಲ ಕೆಲವೇ ನಿಮಿಷಗಳಲ್ಲಿ ಪ್ರತಿಯೊಬ್ಬ ಪಡಿತರ ಫಲಾನುಭವಿಯೂ ಮನೆಯಲ್ಲೇ ಕುಳಿತು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಡ ಕುಟುಂಬಗಳಿಗೆ ಹಾಗೂ ನಿಜವಾದ ಫಲಾನುಭವಿಗಳಿಗೆ ಮಾತ್ರ ಆಹಾರ ಧಾನ್ಯಗಳು ಸಿಗುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 5 ವರ್ಷಕ್ಕಿಂತ ಸಣ್ಣ ಮಕ್ಕಳನ್ನು ಹೊರತುಪಡಿಸಿ ರೇಷನ್ ಕಾರ್ಡ್‌ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಒಂದು ವೇಳೆ ನಿಗದಿತ ಸಮಯದೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಪೂರೈಕೆ ಸ್ಥಗಿತಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಲಾಗಿದೆ ಎನ್ನುವ ಮಾಹಿತಿ ಇದೆ. ಆನ್‌ಲೈನ್‌ನಲ್ಲಿ ಇ-ಕೆವೈಸಿ ಪ್ರಕ್ರಿಯೆ ವಿವರ * ಮೊಬೈಲ್ ಮೂಲಕ ಪ್ರಕ್ರಿಯೆ ಆರಂಭಿಸುವ ಮುನ್ನ ಕುಟುಂಬದ ಸದಸ್ಯರ ಆಧಾರ್ ವಿವರಗಳು ಹಾಗೂ ಮೂಲ ಪಡಿತರ ಚೀಟಿ ಲಭ್ಯ ಇರಬೇಕು. * ಆಧಾರ್ ಕಾರ್ಡ್‌ಗೆ ಸಕ್ರಿಯ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು (ಒಟಿಪಿ ಪಡೆಯಲು). * ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಈಗಾಗಲೇ ಲಿಂಕ್ ಆಗಿರಬೇಕು. ಲಿಂಕ್ ಆಗಿರದಿದ್ದರೆ ಮೊದಲು ನ್ಯಾಯಬೆಲೆ ಅಂಗಡಿಗೆ ಭೇಟಿ ಇದನ್ನು ಪೂರ್ಣಗೊಳಿಸಿಕೊಳ್ಳಬೇಕಾಗುತ್ತದೆ. * ಮೊಬೈಲ್‌ನಲ್ಲಿ ಇ-ಕೆವೈಸಿ ಮಾಡುವ ವಿಧಾನ * ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್‌ಗಳ ಮುಖಾಂತರ ‘ಮುಖ ಪರಿಶೀಲನೆ’ ಮೂಲಕ ಪ್ರಕ್ರಿಯೆ ನಡೆಸಬಹುದು.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version