Published
3 hours agoon
By
Akkare News

ಈ ಯೋಜನೆಯ ಮುಖ್ಯ ಉದ್ದೇಶ ಏನು? ಪ್ರಸ್ತುತ ಮೊಬೈಲ್ ಅಪ್ಲಿಕೇಶನ್ ಮೂಲಕ ಕೇವಲ ಕೆಲವೇ ನಿಮಿಷಗಳಲ್ಲಿ ಪ್ರತಿಯೊಬ್ಬ ಪಡಿತರ ಫಲಾನುಭವಿಯೂ ಮನೆಯಲ್ಲೇ ಕುಳಿತು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಡ ಕುಟುಂಬಗಳಿಗೆ ಹಾಗೂ ನಿಜವಾದ ಫಲಾನುಭವಿಗಳಿಗೆ ಮಾತ್ರ ಆಹಾರ ಧಾನ್ಯಗಳು ಸಿಗುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
5 ವರ್ಷಕ್ಕಿಂತ ಸಣ್ಣ ಮಕ್ಕಳನ್ನು ಹೊರತುಪಡಿಸಿ ರೇಷನ್ ಕಾರ್ಡ್ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಒಂದು ವೇಳೆ ನಿಗದಿತ ಸಮಯದೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಪೂರೈಕೆ ಸ್ಥಗಿತಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಲಾಗಿದೆ ಎನ್ನುವ ಮಾಹಿತಿ ಇದೆ.
ಆನ್ಲೈನ್ನಲ್ಲಿ ಇ-ಕೆವೈಸಿ ಪ್ರಕ್ರಿಯೆ ವಿವರ * ಮೊಬೈಲ್ ಮೂಲಕ ಪ್ರಕ್ರಿಯೆ ಆರಂಭಿಸುವ ಮುನ್ನ ಕುಟುಂಬದ ಸದಸ್ಯರ ಆಧಾರ್ ವಿವರಗಳು ಹಾಗೂ ಮೂಲ ಪಡಿತರ ಚೀಟಿ ಲಭ್ಯ ಇರಬೇಕು. * ಆಧಾರ್ ಕಾರ್ಡ್ಗೆ ಸಕ್ರಿಯ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು (ಒಟಿಪಿ ಪಡೆಯಲು). * ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಈಗಾಗಲೇ ಲಿಂಕ್ ಆಗಿರಬೇಕು. ಲಿಂಕ್ ಆಗಿರದಿದ್ದರೆ ಮೊದಲು ನ್ಯಾಯಬೆಲೆ ಅಂಗಡಿಗೆ ಭೇಟಿ ಇದನ್ನು ಪೂರ್ಣಗೊಳಿಸಿಕೊಳ್ಳಬೇಕಾಗುತ್ತದೆ. * ಮೊಬೈಲ್ನಲ್ಲಿ ಇ-ಕೆವೈಸಿ ಮಾಡುವ ವಿಧಾನ * ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ಗಳ ಮುಖಾಂತರ ‘ಮುಖ ಪರಿಶೀಲನೆ’ ಮೂಲಕ ಪ್ರಕ್ರಿಯೆ ನಡೆಸಬಹುದು.




