ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಂಜಿರ ಪೂಜಾರಿ, ಕಕ್ಕೆಪದವು ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಯ ಭಾಗವಾಗಿ ಈಗಾಗಲೇ ಅವರ ಒಂದು ಕಾಲನ್ನು ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಲಾಗಿದೆ.ಕುಂಜಿರ ಪೂಜಾರಿ ಅವರ ಕುಟುಂಬವು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ. ಅವರಿಗೆ ಇಬ್ಬರು ಗಂಡು ಮಕ್ಕಳು — ಒಬ್ಬರು 10ನೇ ತರಗತಿಯಲ್ಲಿ ಹಾಗೂ ಮತ್ತೊಬ್ಬರು 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕುಟುಂಬದ ಮೇಲೆ ಬಾಡಿಗೆ ಸೇರಿದಂತೆ ಹಲವು ಆರ್ಥಿಕ ಹೊರೆಗಳಿವೆ. ಆದರೆ ಮುಂದಿನ ದಿನಗಳಲ್ಲಿ ಅವರ ಚಿಕಿತ್ಸಾ ವೆಚ್ಚ ಹಾಗೂ ಕುಟುಂಬದ ಅಗತ್ಯಗಳಿಗೆ ಇನ್ನಷ್ಟು ನೆರವು ಬೇಕಾಗಿದೆ.