Published
54 minutes agoon
By
Akkare News
ಮಂಗಳೂರಿನ ಕಾನೂನು ವಿದ್ಯಾರ್ಥಿಗಳಾದ ಯು ಟಿ ಫರೀದ್, ಕುಡುಪು ಗಗನ್ ಭಾಸ್ಕರ್, ಸಾತ್ವಿಕ್ ಕುಮಾರ್ ಜೈನ್, ಪ್ರಣವ್ ಜಿ ಎಸ್, ನೆಲ್ಲಿತ್ತಾಯ, ಕೆವಿನ್ ಲೋಬೋ ಹಾಗೂ ಪವನ್ ಉಮೇಶ್ ಶೆಟ್ಟಿ ಅವರು ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಯು ಟಿ ಖಾದರ್ ಫರೀದ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಕ್ತಿಯಿಂದ ಆಚರಿಸುವ ಪವಿತ್ರ ನಾಗರ ಪಂಚಮಿ ಹಬ್ಬದ ಪ್ರಯುಕ್ತ ರಜೆ ಘೋಷಿಸುವಂತೆ ಮನವಿ ಮಾಡಿದ್ದರು.
ವಿದ್ಯಾರ್ಥಿಗಳ ಮನವಿಯನ್ನು ಸಚಿವ ಖಾದರ್ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಗಮನಕ್ಕೆ ತಂದಿದ್ದರು. ಇದೀಗ ವಿದ್ಯಾರ್ಥಿ ಸಮೂಹದ ಮನವಿಗೆ ಅಸ್ತು ಎಂದಿರುವ ಸಿಎಂ ಅವರು ಈ ಬಗ್ಗೆ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ರಜೆ ಘೋಷಿಸುವ ಅಧಿಕಾರ ನೀಡಿ ಆದೇಶ ನೀಡಿರುವ ಹಿನ್ನಲೆಯಲ್ಲಿ ಭಾನುವಾರ ದ ಕ ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಾಗರ ಪಂಚಮಿ ಆಚರಿಸುವ ಆಗಸ್ಟ್ 17 ರಂದು ಸೋಮವಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.



