Published
8 hours agoon
By
Akkare News
ಉಮೇಶ್ ಶೆಟ್ಟಿ ಎಂಬಾತ ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದು, ಇದೀಗ ಕೃಷಿ ಕೆಲಸ ಕಾರ್ಯ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ವಿವಾಹಿತನಾದ ಈತ ಎರಡು ಮಕ್ಕಳ ತಂದೆಯಾಗಿದ್ದು, ಬಸ್ಸಿನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಲೈಂಗಿಕ ಕೃತ್ಯ ಎಸಗಿದ್ದಾನೆ. ಕಾಪುಮಜಲು ಎಂಬಲ್ಲಿ ಬಂಟರ ಸಂಘದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಕ್ಷಣ ಈತನ ಬಂಧನವಾಗಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರ ವಿಟ್ಲ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ, ಮುಂದಿನ ತನಿಖೆ ನಡೆಸುತ್ತಿದ್ದಾರೆ.



