Published
7 hours agoon
By
Akkare News
ಈಚೆಗೆ ವೈರಲ್ ಆಗಿರುವ ವಿಡಿಯೋದಿಂದಾಗಿ ಜೈಲು ಆಡಳಿತಕ್ಕೆ ತೀವ್ರ ಮುಜುಗರ ಎದುರಾಗಿದೆ. ಇದರ ಬೆನ್ನಲ್ಲೇ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ನಡೆಸಿದ ದಿಢೀರ್ ತಪಾಸಣೆಯು ಜೈಲಿನಲ್ಲಿ ಭಾರೀ ಸಂಚಲವನ್ನುಂಟು ಮಾಡಿದೆ. ಈಚೆಗೆ ಏಕಾಏಕಿ ನಡೆಸಿದ ಕಾರ್ಯಾಚರಣೆಯ ಬಿಸಿಯು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹೈಪ್ರೊಫೈಲ್ ಕೈದಿಗಳಿಗೂ ತಟ್ಟಿದೆ ಎಂದು ಹೇಳಲಾಗಿದೆ.
ಇದರೊಂದಿಗೆ ಪ್ರಜ್ವಲ್ ರೇವಣ್ಣ ಪ್ರಕರಣದ ಮತ್ತೊಬ್ಬ ಆರೋಪಿ ಮತ್ತು ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಹೆಚ್ಚಿನ ಆದ್ಯತೆ ನೀಡಿದೆ. ಈ ಆರೋಪಿಗೆ ಬೇರೆ ಕೈದಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಈಗಾಗಲೇ ಅವರನ್ನು ಮತ್ತೊಂದು ಬ್ಯಾರಕ್ಗೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.