ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ, ಗುಳಿಗ ದೈವ ಸನ್ನಿಧಿಯಲ್ಲಿ ಕೋಲ ಸೇವೆ
ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ. ದರ್ಶನ್ಗೆ ಪ್ರದೋಷ್ ಮಾಫಿ ಸಾಕ್ಷಿ ಕಂಟಕವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದೈವದ ಸನ್ನಿಧಿಯಲ್ಲಿ ಸೇವೆ ಮಾಡಿಸಿದ್ದಾರೆ. ಪ್ರಕರಣದ ಸಂಕಷ್ಟದಿಂದ ಪಾರಾಗಲು ದೈವದ ಮೊರೆ ಹೋಗಿರುವ ವಿಜಯಲಕ್ಷ್ಮಿ, ವಿಶೇಷ ಪೂಜೆ ಹಾಗೂ ಹರಕೆ ಮೂಲಕ ದೈವಾನುಗ್ರಹ ಕೋರಿದ್ದಾರೆ.