Published
16 hours agoon
By
Akkare News
ಈ ಬಗ್ಗೆ ಖಚಿತ ಮಾಹಿತಿ ಪಡೆದ ಭಜರಂಗದಳದ ಕಾರ್ಯಕರ್ತರು ಜಿಡೆಕಲ್ಲು ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ವಾಹನದಲ್ಲಿದ್ದ ಮೂರು ಹಸುಗಳು ಹಾಗೂ ಒಂದು ಹೋರಿಯನ್ನು ರಕ್ಷಿಸಲಾಗಿದೆ.ಸಾಗಾಟ ನಡೆಸುತ್ತಿದ್ದ ವಾಹನದಲ್ಲಿ ಒಟ್ಟು ಮೂವರು ಆರೋಪಿಗಳಿದ್ದು, ಭಜರಂಗದಳ ಕಾರ್ಯಕರ್ತರು ತಡೆಯುತ್ತಿದ್ದಂತೆ ಇಬ್ಬರು ಪರಾರಿಯಾಗಲು ಯಶಸ್ವಿಯಾಗಿದ್ದಾರೆ.
ಆದರೆ ಸ್ಥಳದಲ್ಲಿದ್ದ ಒಬ್ಬ ಆರೋಪಿಯನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದೆ. ರಕ್ಷಿಸಲ್ಪಟ್ಟ ಗೋವುಗಳನ್ನು ಹಾಗೂ ವಶಪಡಿಸಿಕೊಂಡ ಪಿಕ್ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ



