Published
20 hours agoon
By
Akkare News
ರಾಜಕೀಯ ಲಾಭಕ್ಕಾಗಿ ಹಾಗೂ ಕೋಮುಗಲಭೆ ಎಬ್ಬಿಸಲು ಸಣ್ಣ ವಿಷಯಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ನನ್ನನ್ನು ಆಹ್ವಾನಿಸುವ ಯಾವುದೇ ಹಕ್ಕಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹೆಣ್ಣುಮಗಳಿಗೆ ಅನ್ಯಾಯವಾದಾಗಲೂ ನಾನು ಆಕೆಯ ಪರವಾಗಿ ಧ್ವನಿ ಎತ್ತಿದ್ದೇನೆ. ಈ ಪುತ್ತೂರು ಚಲೋ ಕಾರ್ಯಕ್ರಮದ ಬಳಿಕ ಪ್ರತಿಭಟನಾಕಾರರು ಸಂತ್ರಸ್ತೆಗೆ ಅನ್ಯಾಯ ಎಸಗಿರುವ ಜಗನ್ನಿವಾಸ್ ಅವರ ಮನೆಗೆ ಮುತ್ತಿಗೆ ಹಾಕಲು ಬರುವುದಾದರೆ, ನಾನು ಖುದ್ದಾಗಿ ಈ ಪ್ರತಿಭಟನೆಗೆ ಬೆಂಬಲ ನೀಡುತ್ತೇನೆ. ಆ ಪ್ರಕರಣವನ್ನು ಬಗೆಹರಿಸದೆ ನನ್ನ ಬಗ್ಗೆ ಮಾತನಾಡಲು ಯಾರಿಗೂ ಅರ್ಹತೆಯಿಲ್ಲ ಎಂದು ಪ್ರತಿಭಾ ಕುಳಾಯಿ ಸ್ಪಷ್ಟಪಡಿಸಿದರು.