Published
17 hours agoon
By
Akkare News
ಘಟನೆಯ ವಿವರ:
ಕಳೆದ ಎರಡು ವರ್ಷಗಳಿಂದ ಹಕೀಂ ಕೂರ್ನಡ್ಕ ಶಾಸಕರ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ ಆತ ಸುದ್ದಿಗೋಷ್ಠಿ ನಡೆಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಸಂದೇಶ (ವಾಯ್ಸ್ ಮೆಸೇಜ್) ರವಾನಿಸುವ ಮೂಲಕ ಪಕ್ಷ ಮತ್ತು ಶಾಸಕರಿಗೆ ಮುಜುಗರ ಉಂಟುಮಾಡುತ್ತಿದ್ದ. ಆದರೆ, ಈತನಿಗೆ ಕಾಂಗ್ರೆಸ್ನಲ್ಲಿ ಯಾವುದೇ ಹುದ್ದೆ ಇಲ್ಲ ಹಾಗೂ ಈತ ಪಕ್ಷದ ಕಾರ್ಯಕರ್ತನಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಈಗಾಗಲೇ ಸ್ಪಷ್ಟನೆ ನೀಡಿತ್ತು.
ಘಟನೆ ಕುರಿತು ಶಾಸಕ ಅಶೋಕ್ ಕುಮಾರ್ ರೈ ಮಾತು:
ಈ ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, “ನಾವು ಕಚೇರಿಯಲ್ಲಿದ್ದಾಗ ಕಾರ್ಯಕರ್ತರು ಇಂದಿರಾ ಕ್ಯಾಂಟೀನ್ ಕಡೆಗೆ ಊಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಕೀಂ ಕೂರ್ನಡ್ಕ ಎಂಬಾತ ಪ್ರೆಸ್ ಕ್ಲಬ್ ಬಳಿ ಬಂದು ಶಾಸಕರ ಜಾತಕವನ್ನು ಪ್ರೆಸ್ನಲ್ಲಿ ಜಾಹೀರಾತು ಮಾಡುತ್ತೇನೆ, ಬುದ್ಧಿ ಕಲಿಸುತ್ತೇನೆ ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾನೆ. ಅಲ್ಲದೆ ಶಾಸಕರ ತಂದೆ-ತಾಯಿ, ಹೆಂಡತಿ ಹಾಗೂ ಮಹಿಳಾ ಕಾರ್ಯಕರ್ತರ ವಿರುದ್ಧವೂ ಕೀಳುಮಟ್ಟದ ಮಾತುಗಳನ್ನು ಆಡಿ ನಿಂದಿಸಿದ್ದಾನೆ” ಎಂದು ತಿಳಿಸಿದರು.