Published
2 hours agoon
By
Akkare News
ದಕ್ಷಿಣ ಕನ್ನಡ (ದಕ್ಷಿಣ ಕನ್ನಡ ) ಜಿಲ್ಲೆಯಲ್ಲಿ ಸೆಪ್ಟೆಂಬರ್ 18ರಂದು ಕರೆಯಲಾಗಿರುವ ರಾಜ್ಯ ಸಚಿವ ಸಂಪುಟ (Cabinet) ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ರಾಜ್ಯಭಾಷೆಯನ್ನಾಗಿ ಸಾರುವ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (ಅಶೋಕ್ ಕುಮಾರ್ ರೈ ) ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದ ಸಮಸ್ತ ಜನರ ದಶಕಗಳ ಕನಸಾಗಿರುವ ತುಳು ಭಾಷೆಯ ಅಧಿಕೃತ ಮಾನ್ಯತೆಯ ಪ್ರಕ್ರಿಯೆಗಳು ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿವೆ ಎಂದು ಮಾಹಿತಿ ನೀಡಿದರು.