Published
22 hours agoon
By
Akkare News
ಸೆಪ್ಟೆಂಬರ್ 17: ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ‘ತಾತ್ಕಾಲಿಕ ಕೆಂಪು ವಲಯ’ (ಟೆಂಪೋರರಿ ರೆಡ್ ಜೋನ್ ) ಎಂದು ಘೋಷಿಸಲಾಗಿದ್ದು, ಯಾವುದೇ ಮಾದರಿಯ ಡ್ರೋನ್ ಹಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.