Published
5 hours agoon
By
Akkare News
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕರಾವಳಿ ಭಾಗದ ಮೂಲಸೌಕರ್ಯ, ಪ್ರವಾಸೋದ್ಯಮ, ಬಂದರು, ರಸ್ತೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡುವ ₹32,611 ಕೋಟಿ ಮೊತ್ತದ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೊಸ ವೇಗ ಸಿಗುವ ನಿರೀಕ್ಷೆ ಮೂಡಿದೆ.
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈವರೆಗಿನ ಎಲ್ಲಾ ನೀತಿಗಳಿಗಿಂತ ಭಿನ್ನವಾದ ನೀತಿ ಇದಾಗಲಿದೆ. ಹೂಡಿಕೆದಾರರಿಗೆ ಹೆಚ್ಚಿನ ಶಕ್ತಿ ಹಾಗೂ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲಾಗುವುದು. ಮಲೆನಾಡು ಒಳಗೊಂಡಂತೆ ಕರಾವಳಿ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಲಾಗುವುದು. ಅಲ್ಲದೆ ಅನೇಕ ಪ್ರೋತ್ಸಾಹಕಗಳನ್ನು ನೀಡಲು ಯೋಜಿಸಲಾಗಿದೆ ಎಂದು ಅವರು ತಿಳಿಸಿದರು.