Published
57 minutes agoon
By
Akkare News
ಕರಾವಳಿಯಲ್ಲಿ ಪ್ರಥಮ ಬಾರಿಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಘೋಷಣೆ ಮಾಡಿದೆ. ಜೊತೆಗೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿ ಆಗಿದೆ.ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮುಂಬರುವ ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.