ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬಿಟ್ ಕಾಯಿನ್ ಹಗರಣ ಯು ಟರ್ನ್… ಡಿ ವೈ ಎಸ್ ಪಿ ಶ್ರೀಧರ್ ಪೂಜಾರಿ ಅರೆಸ್ಟ್

Published

on

ಬೆಂಗಳೂರು, : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ಡಿವೈಎಸ್​ಪಿ ಶ್ರೀಧರ್ ಪೂಜಾರಿ​​ ಅನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.ಬಿಟ್​ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಅವರ ಮೇಲಿತ್ತು. ಹೀಗಾಗಿ ಇಂದು ವಿಚಾರಣೆಗೆ ಕರೆಸಿ ಸಿಐಡಿ ಕಚೇರಿಯಲ್ಲೇ ಎಸ್​​ಐಟಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

 

ಎಸ್​ಐಟಿ ರಚನೆ ಬಳಿಕ ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

 

 

ಡಿವೈಎಸ್‌ಪಿ ಶ್ರೀಧರ್ ಈ ಹಿಂದೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು. ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ವಿರುದ್ಧ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು.

 

 

 

ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು. ಬಿಟ್ ಕಾಯಿನ್ ಕೇಸ್​​​​ನಲ್ಲಿ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪವನ್ನು ಶ್ರೀಧರ್ ಕೆ. ಪೂಜಾರಿ ಎದುರಿಸಿದ್ದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement