Published
11 months agoon
By
Akkare News
ಧರ್ಮಸ್ಥಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.ಕ್ಷೇತ್ರಕ್ಕೆ ಆಗಮಿಸಿದ ಶಿವಕುಮಾರ್ ಅವರನ್ನು ಡಿ. ಸುರೇಂದ್ರ ಕುಮಾರ್ ಸ್ವಾಗತಿಸಿದರು. ಡಿಸಿಎಂ ಜತೆ ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್ ಹಾಗು ಮತ್ತಿತರರು ಉಪಸ್ಥಿತರಿದ್ದರು.










