Published
2 years agoon
By
Akkare News
ಬೆಂಗಳೂರು: ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವ ಬಗ್ಗೆ ಆದೇಶವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಆದೇಶ ಹೊರಡಿಸಿದೆ.
ಇದೇ ವೇಳೆ ಆದೇಶದಲ್ಲಿ, ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಸೂಚಿಸಿದ.
ಈ ಬಗ್ಗೆ ಅಗತ್ಯ, ವೈಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸುವುದು. ಈ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳವುದು ಅಂತ ತಿಳಿಸಿದೆ.