Published
8 months agoon
By
Akkare News
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾನೆ.



ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಹೇಳಿಕೆ ನೀಡುತ್ತಿದ್ದಾನೆ.







