Connect with us

ಇತರ

*ಪರ್ಪುಂಜದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಗುವನ್ನು ಎದೆಗಪ್ಪಿಕೊಂಡು ಆರೈಕೆ ಮಾಡಿದ ಚಂದ್ರಪ್ರಭಾ ಗೌಡ*

Published

on

 ಪುತ್ತೂರು :ನವೆಂಬರ್ 03: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.
ಪರ್ಪುಂಜದಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಆಟೋದಲ್ಲಿದ್ದ ಬಾಲಕಿ ಮತ್ತು ಮಹಿಳೆಯೊಬ್ಬರು ಸಾವನಪ್ಪಿದ್ದರು. ಈ ಘಟನೆ ಬಗ್ಗೆ ಮಾಹಿತಿ ಅರಿತ ಕೂಡಲೇ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಅವರು ನೇರವಾಗಿ ಮೆಡ್ ಲ್ಯಾಂಡ್ ಆಸ್ಪತ್ರೆಗೆ ಆಗಮಿಸಿ ಅಲ್ಲಿ ದಾಖಲಾಗಿದ್ದ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ವಿಷಯದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಪ್ರವೃತ್ತರಾಗಿದ್ದರು.

ಅಪಘಾತಕ್ಕೀಡಾದ ರಿಕ್ಷಾದಲ್ಲಿ 6 ತಿಂಗಳ ಮಗುವೊಂದು ಗಾಯಗೊಂಡಿದ್ದು ಆ ಮಗುವಿನ ತಾಯಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಕಾರಣ ಮಗುವಿನ ಆರೈಕೆಯಲ್ಲಿ ತೊಡಗಿದ ಚಂದ್ರಪ್ರಭಾ ಗೌಡ ಅವರು ಮಗುವನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಲ್ಲದೇ ಬಳಿಕ ಇನ್ನೊಂದು ಖಾಸಗಿ ಆಸ್ಪತ್ರೆಗೆ ಹೋಗಿ ಆ ಬಳಿಕ ಮಗುವಿಗೆ ಸಿಟಿ ಸ್ಕ್ಯಾನ್ ಅಗತ್ಯ ಇದ್ದ ಹಿನ್ನೆಲೆಯಲ್ಲಿ ಮಗುವನ್ನು ದರ್ಶನ್ ಕಲಾ ಮಂದಿರ ಬಳಿ ಇರುವ ಸ್ಕ್ಯಾನಿಂಗ್ ಸೆಂಟರ್ ಗೆ ಕೊಂಡು ಹೋಗಿ ಸಿಟಿ ಸ್ಕ್ಯಾನ್ ಮಾಡಿಸಿದ್ದಾರೆ. ಮಾತ್ರವಲ್ಲದೇ ಸಿಟಿ ಸ್ಕ್ಯಾನ್ ಮಾಡಿದ ಫೀಸ್ ನ್ನು ಕೂಡಾ ಅವರೇ ಭರಿಸಿದ್ದಾರೆ.
ಈ ಎಲ್ಲಾ ಕಾರ್ಯಗಳು ಮುಗಿದಾಗ 10 ಗಂಟೆ ರಾತ್ರಿಯಾಗಿತ್ತು. ಬಳಿಕ ಮಗುವನ್ನು ಮಗುವಿನ ಸಂಬಂಧಿಕರಿಗೆ ಕೊಟ್ಟು ಬಂದಿದ್ದಾರೆ.

ಸಂಜೆಯಿಂದ 10 ಗಂಟೆ ರಾತ್ರಿವರೆಗೂ ಹಸುಗೂಸುವೊಂದರ ಆರೈಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನವೀಯತೆ ಮೆರೆದ ಚಂದ್ರಪ್ರಭಾ ಗೌಡ ಅವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು ಅವರ ಮಾನವೀಯ ಸೇವೆಯ ಫೋಟೋ, ವಿಡಿಯೋ ವೈರಲ್ ಆಗಿದೆ. ಜಾತಿ ಧರ್ಮಕ್ಕಿಂತ ಮಾನವೀಯತೆ ಮುಖ್ಯ ಎನ್ನುವ ಸಂದೇಶ ನೀಡಿದ ಚಂದ್ರಪ್ರಭಾ ಗೌಡ ಅವರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹಲವರು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement