Connect with us

ಕ್ರೈಮ್ ನ್ಯೂಸ್

ಪುತ್ತೂರು : ಮನೆಗೆ ನುಗ್ಗಿ ದರೋಡೆಗೆ ಯತ್ನ ಅರ್ಚಕ ಹಾಗೂ ಆತನ ಪತ್ನಿ ಪೊಲೀಸರ ವಶಕ್ಕೆ

Published

on

ಪುತ್ತೂರು: ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ದರೋಡೆ ಮಾಡಲು ಯತ್ನ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸರು ದಂಪತಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ:
ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ದೂರಿನಂತೆ, ಸದ್ರಿಯವರು ನಿವೃತ್ತ ಪ್ರಾಂಶುಪಾಲರಾಗಿದ್ದು, ದಿನಾಂಕ 17.12.2025 ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ, ಪಿರ್ಯಾದಿದಾರರ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿ ಪಿರ್ಯಾದಿದಾರರನ್ನು ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ಪಿರ್ಯಾದಿದಾರರ ಪತ್ನಿಗೆ ಗಾಯವಾಗಿರುತ್ತದೆ ಹಾಗೂ ಪಿರ್ಯಾದಿದಾರರು ಜೋರಾಗಿ ಕಿರುಚಿರುತ್ತಾರೆ.

ಇದರಿಂದ ಹೆದರಿದ ಸದ್ರಿ ಅಪರಿಚಿತ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿರುತ್ತಾರೆ. ಪಿರ್ಯಾದಿದಾರರ ಮನೆಯಲ್ಲಿದ್ದ ಯಾವುದೇ ಸೊತ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದ ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪುತ್ತೂರು, ಮುಡೂರು ನಿವಾಸಿ (ಪ್ರಸ್ತುತ ಬಾಡಿಗೆ ಮನೆ ವಾಸ:ಪಂಜ) ಕಾರ್ತಿಕ್ ರಾವ್ (ಪ್ರಾಯ:31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25)ಎಂಬವರುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಕ್ಕೆ ಪಡೆದಿರುತ್ತಾರೆ. ಸದ್ರಿ ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement