ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
4 months agoon
By
Akkare News
ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ಇರಾನ್ (Iran) ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ತಮ್ಮ ಬಾಂಬ್ ದಾಳಿಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮಕ್ಕೆ (US Iran Ceasefire) ಸಮ್ಮತಿಸಿದ್ದಾರೆ.

ಕಳೆದ ಐದು ವಾರಗಳಿಂದ ನಡೆಯುತ್ತಿದ್ದ ಯುದ್ಧವು ಜಗತ್ತಿನ ತೈಲ ಪೂರೈಕೆಯ ನಾಡಿಮಿಡಿತವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಂದ್ ಮಾಡಿತ್ತು. ಈಗ ಇರಾನ್ ಈ ಜಲಸಂಧಿಯನ್ನು ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿದೆ. ಟ್ರಂಪ್ ಈ ಹಿಂದೆ ಇರಾನ್ನ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಸಿದ್ದರು, ಇದು ಯುದ್ಧಾಪರಾಧವಾಗಬಹುದು ಎಂದು ವಿಶ್ವಸಂಸ್ಥೆ ಮತ್ತು ಪೋಪ್ ಕೂಡ ಆತಂಕ ವ್ಯಕ್ತಪಡಿಸಿದ್ದರು. ಆದರೆ ಈಗ ಇರಾನ್ ನೀಡಿರುವ 10 ಅಂಶಗಳ ಪ್ರಸ್ತಾವನೆಯ ಆಧಾರದ ಮೇಲೆ ಶಾಂತಿ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಇಸ್ರೇಲ್ ಕೂಡ ಈ ಕದನ ವಿರಾಮಕ್ಕೆ ಬೆಂಬಲ ಸೂಚಿಸಿದೆ ಎಂದು ವರದಿಯಾಗಿದೆ.


‘ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ನಡೆಸಿದ ಮಾತುಕತೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ರಾತ್ರಿ ಇರಾನ್ ಮೇಲೆ ನಡೆಸಬೇಕಿದ್ದ ವಿನಾಶಕಾರಿ ದಾಳಿಯನ್ನು ತಡೆಹಿಡಿಯುವಂತೆ ಅವರು ವಿನಂತಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ, ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿರುವುದಕ್ಕೆ ಪ್ರತಿಯಾಗಿ, ನಾನು ಇರಾನ್ ಮೇಲಿನ ಬಾಂಬ್ ದಾಳಿ ಮತ್ತು ದಾಳಿಯನ್ನು ಎರಡು ವಾರಗಳ ಅವಧಿಗೆ ಅಮಾನತುಗೊಳಿಸಲು ಒಪ್ಪುತ್ತೇನೆ’ ಎಂದು ಟ್ರಂಪ್ ತಿಳಿಸಿದ್ದಾರೆ.





