Published
5 hours agoon
By
Akkare News

ಪೊಲೀಸರು ವಶಪಡಿಸಿಕೊಂಡ ಕಾರನ್ನು ತಪಾಸಣೆ ನಡೆಸಿದಾಗ ದಬಾಯಿಸುವ ದೃಶ್ಯ ಕಂಡುಬಂದಿದೆ. ಕಾರಿನ ಹಿಂಬದಿ ಸೀಟುಗಳನ್ನು ತೆರವುಗೊಳಿಸಿ, ಅಲ್ಲಿ ಪ್ಲಾಸ್ಟಿಕ್ ಹಾಸಿ ಅದರ ಮೇಲೆ ಕರುವೊಂದರ ಕಾಲು ಮತ್ತು ತಲೆಯನ್ನು ಅತ್ಯಂತ ಹಿಂಸಾತ್ಮಕವಾಗಿ ಹಗ್ಗದಿಂದ ಕಟ್ಟಿ ಹಾಕಿರುವುದು ಪತ್ತೆಯಾಗಿದೆ. ಆರೋಪಿಗಳು ಕಳೆದ ಒಂದು ವಾರದಿಂದ ವಿವಿಧೆಡೆ ದನಗಳನ್ನು ಕಳವು ಮಾಡುತ್ತಿದ್ದು, ಮಾಂಸ ಮಾರಾಟದ ಉದ್ದೇಶದಿಂದ ಈ ಕೃತ್ಯ ಎಸಗುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.
ಬಂಧಿತ ಇಬ್ಬರೂ ಆರೋಪಿಗಳು ಹಳೆಯ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಮೊಹಮ್ಮದ್ ಆರಿಫ್: ಈತನ ವಿರುದ್ಧ ಬಜಪೆ, ಬಣಕಲ್ ಮತ್ತು ಮೂಡಬಿದ್ರೆ ಠಾಣೆಗಳಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಇಮ್ರಾನ್: ಈತನ ಮೇಲೆ ಕಾರ್ಕಳ ಮತ್ತು ಮೂಡಬಿದ್ರೆ ಠಾಣೆಗಳಲ್ಲಿ ಮಾದಕ ದ್ರವ್ಯ ಮಾರಾಟ (NDPS), ಜೂಜಾಟ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯಡಿ ಐದಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಪೊಲೀಸರು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದಿದ್ದು, ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.



