Published
2 hours agoon
By
Akkare News
“ಒಂದು ಕೈ ನೆರವಿಗೆ ಚಾಚಿದಾಗ, ಮತ್ತೊಂದು ಬದುಕಿನಲ್ಲಿ ಭರವಸೆಯ ಬೆಳಕು ಮೂಡುತ್ತದೆ” ಎಂಬ ಉದಾತ್ತ ಆಶಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಆರಂಭಿಸಿರುವ ‘ಯುವ ಸೇವಾ ಸ್ಪರ್ಶ’ ಹಾಗೂ ‘ಯುವ ಆರೋಗ್ಯ ಸ್ಪರ್ಶ’ ಎಂಬ ವಿನೂತನ ಸಮಾಜಸೇವಾ ಯೋಜನೆಗಳಿಗೆ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ ಅವರ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ, ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಕೋಶಾಧಿಕಾರಿ ಡಾ.ತ್ರಿವೇಣಿ ರಮೇಶ್ ಮಜಲ, ಆರೋಗ್ಯ ನಿರ್ದೇಶಕ ರತಿ ಕಡೆ ಶಿವಾಲಯ, ಸಮಾಜ ಸೇವಾ ನಿರ್ದೇಶಕ ಸುರೇಶ್ ಪೂಜಾರಿ ಬಾಕಿಲ, ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಾಲ, ಜಯಂತ ಪೂಜಾರಿ ಬರಿಮಾರು, ಗುರುತತ್ವ ನಿರ್ದೇಶಕ ನಾರಾಯಣ ಶ್ರೀಧರ ಪೂಜಾರಿ ಮುಜಲ ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಾಜೇಶ್ ಕೋಟ್ಯಾನ್ ಹಾಗೂ ಘಟಕದ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.




