Published
4 hours agoon
By
Akkare News
ಪುತ್ತೂರು, ಜೂ.15: ಉಪ್ಪಿನಂಗಡಿಯ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಪುತ್ಥಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು.
ಶಾಸಕರ ಕಚೇರಿಯಲ್ಲಿ ನಡೆದ ಈ ಸಂದರ್ಭದಲ್ಲಿ ಬಿಲ್ಲವ ಬ್ರಿಗೇಡ್ ಪ್ರತಿನಿಧಿಗಳು ಉಬಾರ್ ಮಂಜ ಬೈದ್ಯರ ಇತಿಹಾಸ, ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಹಾಗೂ ಇಂದಿನ ಪೀಳಿಗೆಗೆ ಅವರ ತ್ಯಾಗದ ಸಂದೇಶವನ್ನು ತಲುಪಿಸುವ ಅಗತ್ಯತೆಯನ್ನು ವಿವರಿಸಿದರು. ಉಪ್ಪಿನಂಗಡಿಯಲ್ಲಿ ಅವರ ಪುತ್ಥಳಿ ನಿರ್ಮಾಣ ಮಾಡುವ ಮೂಲಕ ಈ ಭಾಗದ ಇತಿಹಾಸವನ್ನು ಉಳಿಸಿ ಬೆಳೆಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಬಿಲ್ಲವ ಬ್ರಿಗೇಡ್ನ ಪ್ರಮುಖರು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ಬಿಲ್ಲವ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಉಪ್ಪಿನಂಗಡಿಯ ಹೆಮ್ಮೆಯ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಸ್ಮರಣಾರ್ಥ ಪುತ್ಥಳಿ ನಿರ್ಮಾಣದ ಬೇಡಿಕೆ ಇದೀಗ ಸಾರ್ವಜನಿಕ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಶೀಘ್ರದಲ್ಲೇ ಮುಂದಿನ ಕ್ರಮಗಳು ಕೈಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ. 




