Connect with us

ಶಾಲಾ ಚಟುವಟಿಕೆ

ಸಾಂದೀಪನಿಯಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಾಗಾರ

Published

on

​ಸಾಂದೀಪನಿ ವಿದ್ಯಾ ಸಂಸ್ಥೆ ಯಶಸ್ವಿ 25 ಸಂವತ್ಸರ ಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ಸರಣಿ ಕಾರ್ಯಾಗಾರ ‘ ರಜತ ಪಲ್ಲವ ‘ದ ಮೊದಲ ಕಾರ್ಯಕ್ರಮ ನಡೆಯಿತು.

 

​ ಸಂಪನಿಮ್ಮೂಲ ವ್ಯಕ್ತಿಗಳಾದ ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಜೆಸಿ ಸುಹಾಸ್ ಮರಿಕೆ ಇವರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೆಯ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು. ಈ ತರಬೇತಿಯಲ್ಲಿ ಪ್ರಮುಖವಾಗಿ ಟೀಮ್ ವರ್ಕ್ ನ ಮಹತ್ವ, ನಿರ್ದಿಷ್ಟ ಗುರಿಯ ಅಗತ್ಯ ಮತ್ತು ಅದನ್ನು ಸಾಧಿಸುವ ಬಗ್ಗೆ ವಿವಿಧ ಚಟುವಟಿಕೆಗಳನ್ನು ಒಳಗೊಂಡಿದ್ದವು.

​ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ, ಉಪಾಧ್ಯಕ್ಷರಾದ ಶ್ರೀ ಪ್ರಸನ್ನ ಎನ್ ಭಟ್, ಕೋಶಾಧಿಕಾರಿಗಳಾದ ಶ್ರೀ ಹರೀಶ್ ಪುತ್ತೂರಾಯ, ಜತೆ ಕಾರ್ಯದರ್ಶಿ ಶ್ರೀ ಸುಬ್ರಾಯ ಬಿ ಎಸ್ ಮತ್ತು ಮುಖ್ಯ ಶಿಕ್ಷಕ ಶ್ರೀ ಪ್ರಸನ್ನ ಕೆ ಇವರು ಉಪಸ್ಥಿತರಿದ್ದರು. ಹಾಗೂ ಈ ಕಾರ್ಯಕ್ರಮದಲ್ಲಿ 9ನೇ ತರಗತಿಯ 108 ವಿದ್ಯಾರ್ಥಿಗಳು ಭಾಗಿಯಾಗಿದ್ದರು.ತರಬೇತಿ ಕಾರ್ಯಕ್ರಮದ ಸoಯೋಜಕರಾದ ಸಹ ಶಿಕ್ಷಕರಾದ ಶ್ರೀ ಆನಂದ್ ಆರ್ ರವರು ಕಾರ್ಯಕ್ರಮದ ಗುರಿ ಮತ್ತು ಉದ್ದೇಶಗಳನ್ನು ವಿವರಿಸಿ, ಸಂಪನ್ಮೂಲವ್ಯಕ್ತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಉಷಾ ಇವರು ವಂದಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement