Connect with us

ಇತ್ತೀಚಿನ ಸುದ್ದಿಗಳು

ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ನಡುವೆ ಮಾತಿನ ಚಕಮಕಿ | ಗುಂಪು ಸೇರಿ ಉದ್ವಿಗ್ನತೆ; ಪೊಲೀಸರಿಂದ ಲಾಠಿ ಪ್ರಹಾರ

Published

on

ಪುತ್ತೂರು: ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ನಡೆದ ಮಾತಿನ ಚಕಮಕಿ ಬಳಿಕ ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿದ ಪರಿಣಾಮ ದರ್ಭೆ ಜಂಕ್ಷನ್‌ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ದರ್ಭೆ ಜಂಕ್ಷನ್‌ನ ಜೆರಾಕ್ಸ್ ಅಂಗಡಿಗೆ ಮಹಿಳೆಯೊಬ್ಬರು ಗ್ರಾಹಕಿಯಾಗಿ ಬಂದಿದ್ದ ವೇಳೆ ಯಾವುದೋ ವಿಚಾರಕ್ಕೆ ಅಂಗಡಿಯಾತ ಹಾಗೂ ಮಹಿಳೆಯ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಳಿಕ ವಿಷಯ ತಿಳಿದು ಎರಡೂ ಕಡೆಯವರ ಬೆಂಬಲಿಗರು ಸ್ಥಳದಲ್ಲಿ ಗುಂಪುಗೂಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತೆರಳಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಈ ವೇಳೆ ನಾಲ್ವರನ್ನು ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಬೀಸಿದ್ದು, ಘಟನೆ ನೋಡಲು ಸೇರಿದ್ದ ಕೆಲವರಿಗೂ ಲಾಠಿ ಏಟು ಬಿದ್ದಿದೆ ಎನ್ನಲಾಗಿದೆ. ಬಳಿಕ ಹಲವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯಿಂದ ದರ್ಭೆ ಜಂಕ್ಷನ್‌ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ವಿಚಾರಣೆಯಿಂದ ತಿಳಿದುಬರಬೇಕಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement