ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಪ್ಪಳಿಗೆ ನಿವಾಸಿ ಕೃಷ್ಣ ರಾವ್...
ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮತ್ತು ಮಾಣಿಲ,ಪೆರುವಾಯಿ,ಕೇಪು.ಅಳಿಕೆ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.28 ರಂದು ಈ...
ಬೆಂಗಳೂರು : ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಐವರು ಸದಸ್ಯರನ್ನು ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮೈಸೂರಿನ...
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಈ ಸಂಬಂದ ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ....
ದಿನಾಂಕ 23.06.2025 ರಂದು ಬಿಜೆಪಿಯು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಪುತ್ತೂರಿನ ಶಾಸ...
ಬೆಂಗಳೂರು : ಜೂನ್ 27: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ...
ಮಂಜೇಶ್ವರ/ಕುಂದಾಪುರ: ಮನೆಯಲ್ಲಿ ನಿದ್ರಿಸುತ್ತಿದ್ದ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅವರನ್ನು ಕೊಲೆಗೈದುದಲ್ಲದೆ ನೆರೆಮನೆಯ ಮಹಿಳೆಯನ್ನು ತನ್ನ ಮನೆಗೆ ಕರೆಸಿ ಅವರ ಕೊಲೆಗೂ ಯತ್ನಿಸಿದ ಘಟನೆ ಮಂಜೇಶ್ವರ ಠಾಣೆ ವ್ಯಾಪ್ತಿಯ ವರ್ಕಾಡಿಯಲ್ಲಿ ನಡೆದಿದೆ. ವರ್ಕಾಡಿ ನಲ್ಲಂಗಿ...
ಬಂಟ್ವಾಳ, : ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದಕ್ಕೂ ಮೊದಲು, ಜೂನ್ 2 ರಂದು, ಫ್ಲೈಓವರ್ನ...
ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಪ್ರಿಯಾ ಎಂದು ಗುರುತಿಸಲಾಗಿದೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ...
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಹಲವೆಡೆ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ, ಮಧ್ಯಾಹ್ನ ಭಾರೀ ಗಾಳಿ-ಮಳೆಗೆ ವ್ಯಾಸನಗರ ಬಳಿ ಮರ, ವಿದ್ಯುತ್ ಕಂಬ ಧರೆಗುರುಗಳಿದ್ದು, ಸ್ವಲ್ಪ ಕಾಲ ವಾಹನ...
ಪುತ್ತೂರು: ಪುತ್ತೂರು ತಹಸೀಲ್ದಾರ್ ಆಗಿ ಎಸ್ ಬಿ ಕೂಡಲಗಿಯವರನ್ನು ಸರಕಾರ ನೇಮಕಗೊಳಿಸಿದೆ .ಇವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನಲ್ಲಿ ಗ್ರೇಡ್ 1 ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ...
ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು....
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ...
ವಿಟ್ಲ ಪಡ್ನೂರು ಗ್ರಾಮ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟ ದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಇವರು ಮಾದರಿ ಹಿರಿಯ ಪ್ರಾಥಮಿಕ...
ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಈ ವಿಚಾರವಾಗಿ...
ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್ ಸಿಇಒ...
ಮಂಡ್ಯ: ಇನ್ ಸ್ಟಾಗ್ರಾಮ್ ನಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿದ್ದು, ಜೋಡಿ ಪ್ರೀತಿ, ಪ್ರೇಮ, ಪ್ರಣಯ ಅಂತ ಸುತ್ತಾಡಿ, ಕೊನೆಗೆ ಜಗಳ ನಡೆದು ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಸಕೊಪ್ಪಲು...
ಚಾರ್ಮಾಡಿ, ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ಮಂಗಳೂರು: ಮಳೆ ಅಬ್ಬರಕ್ಕೆ ಸಕಲೇಶಪುರ ಬಳಿ ಶಿರಾಡಿ ಘಾಟಿಯಲ್ಲಿ ಭೂಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿದ ಪರಿಣಾಮ...
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅಪಘಾತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಎರಡು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ, 17 ಜನರಿಗೆ ಸಾಮಾನ್ಯ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಬೇರೆ ಬೇರೆ...
ಪುತ್ತೂರು: ಕುಂಬ್ರದ ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ಬೆಂಗಳೂರಿನಲ್ಲಿ ಇಂದು ನಿಧನರಾದರು. ಸತೀಶ್ ಕುಮಾರ್ ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟರ್, ಮಾಜಿ ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಟ್ನರ್, ಪುತ್ತೂರು ತಾಲೂಕು ಪತ್ರಕರ್ತರ ಸಂಘದ...
ಪುತ್ತೂರು: ಕಳೆದ ಎರಡು ವರ್ಷಗಳಲ್ಲಿ ಉಚಿತ ಥೆರಪಿ ಮೂಲಕ ಸಾವಿರಾರು ಫಲಾನುಭವಿಗಳಿಗೆ ಆರೋಗ್ಯ ಕ್ಷೇತ್ರದಲ್ಲಿ ಆರೋಗ್ಯ ಒದಗಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟ ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರಿನ ಮುಖ್ಯಸ್ಥ ಕೆ.ಪ್ರಭಾಕರ್ ಸಾಲಿಯಾನ್ ರವರಿಗೆ ದ್ವಿತೀಯ ಬಾರಿಗೆ ಕಂಪಾನಿಯೋ...
ಉಪ್ಪಿನಂಗಡಿ :ದಕ್ಷಿಣ ಕನ್ನಡ): ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಂಗಳವಾರ ಸಂಜೆ ಗುಡ್ಡದ ಮಣ್ಣು ರಸ್ತೆಗೆ ಕುಸಿದು ಮಂಗಳೂರು-ಬೆಂಗಳೂರು ಮಧ್ಯೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ನಿಂದ...
ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ತೆಂಕಿಲ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.24 ರಂದು ನಡೆದಿದ್ದು ಅಪಘಾತದಿಂದ ಬೈಕ್ ಸವಾರ ಗಾಯಗೊಂಡಿದ್ದಾರೆ. ಬೈಕ್ ಸವಾರ ತೆಂಕಿಲ ಕೋಡಿಜಾಲು ನಿವಾಸಿ ಆಕಾಶ್...
ಕಲಬುರಗಿ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1:30ರ ಸುಮಾರಿಗೆ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದವರು ಎಂದು...
ರಸ್ತೆ ಹೊಂಡ ಗುಂಡಿ ಮುಚ್ಚಲು ಬರಲಿದೆ ಹೊಸದಾಗಿ ಸಂಶೋಧನೆಗೊಂಡ ‘ಇಕೋಫಿಕ್ಸ್ ಕೆಮಿಕಲ್ ಪುತ್ತೂರು: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಬಿದ್ದಿವೆ. ಅದನ್ನು ಖಾಯಂ ಆಗಿ ಮುಚ್ಚುವ ನಿಟ್ಟಿನಲ್ಲಿ ಹೊಸದಾಗಿ ಸಂಶೋಧನೆಗೊಂಡ ಇಕೋಫಿಕ್ಸ್ ಎಂಬ ಕೆಮಿಕಲ್ ಬಂದಿದ್ದು...
“ಶಾರೀರಿಕ ,ಬೌದ್ಧಿಕ ,ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತಿ ಅವಶ್ಯಕ”-ಕರುಣಾಕರ ಉಪಾಧ್ಯಾಯ ಬನ್ನೂರು : ಯೋಗ ಎನ್ನುವುದು ಮಾನವನ ಶಾರೀರಿಕ ,ಬೌದ್ಧಿಕ ,ಮತ್ತು ಮಾನಸಿಕ ವಿಕಾಸಕ್ಕೆ ಅತಿ ಅವಶ್ಯಕವಾಗಿದ್ದು .ಅದು ಅತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು ಎಂದು...
ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಇಳಿಸಿದೆ. ಈ ಮೂಲಕ ಮದ್ಯದಂಗಡಿ ಮಾಲೀಕರ ಒತ್ತಡಕ್ಕೆ ಸರಕಾರ ಮಣಿದಿದೆ. ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಸರಕಾರ ಭಾರೀ ದೊಡ್ಡ ಪ್ರಮಾಣದಲ್ಲಿ ಏರಿಕೆ ಮಾಡಿತ್ತು. ಇದರಿಂದ ಮದ್ಯದಂಗಡಿ ಮಾಲೀಕರು ಕಂಗಾಲಾಗಿದ್ದರು....
ಬೆಳ್ತಂಗಡಿ:ಕೊಯ್ಯೂರು ಮಲೆಬೆಟ್ಟು ನಿವಾಸಿ ರಝೀನ (24) ನಾಪತ್ತೆಯಾಗಿದ್ದಾರೆ. ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗ 40 ದಿನಗಳ ಹಿಂದೆ ಸಾವಿಗೀಡಾಗಿತ್ತು. ನಂತರ ಕೆಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ...
ಮುಂಬೈ: ಮಾನವೀಯತೆ ಎಲ್ಲಿದೆ? ಇನ್ನೆಂಥಾ ಕ್ರೂರಿ ಇರಬೇಕು ಆತ. ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60...
ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ....
ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದ ಹಣ ಬಿಡುಗಡೆಯಾಗದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NWKRTC)...
ಹೆಚ್ಚಾಗಿ ಪುತ್ತೂರಿನವರೇ ಸೇರಿ ಮಾಡಿರುವ ಚಿತ್ರವೊಂದು,ಜು 4 ರಂದು “ಜಂಗಲ್-ಮಂಗಲ್ “ಸಿನಿಮಾ. ಭರ್ಜರಿ ತೆರೆಗೆ ಬರಲಿದೆ. ಚಿತ್ರರಂಗದಲ್ಲಿ ನಿಧಾನವಾಗಿ ಸದ್ದು ಮಾಡುತ್ತಿದೆ. ‘ಜಂಗಲ್ ಮಂಗಲ್’ ಎಂಬ ವಿಶಿಷ್ಠ ಶೀರ್ಷಿಕೆ ಹೊಂದಿರುವ ಚಿತ್ರ. ಕೆ.ಜಿ.ಫ್ ಮುಂತಾದ ಚಿತ್ರಗಳಲ್ಲಿ...
ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆಯಾಗಿರಲಿಲ್ಲ. ಈಗ ಜೂನ್ 23ರಿಂದಲೇ...
ಮಂಗಳೂರು: ಗಾಯಕ ರಾಜೇಶ್ ಗೆ ವಂಚನೆ ಮಾಡಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ. ವೃತ್ತಿಯಲ್ಲಿ ಗಾಯಕರಾಗಿದ್ದಾರೆ. ಇವರು Arvind vivek ಎಂಬ ಹೆಸರಿನಲ್ಲಿ ಫೇಸ್ಬುಕ್ ಪೇಜ್ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. 2024 ರಲ್ಲಿ ಫೇಸ್ಬುಕ್ ಮೂಲಕ ಸಂಧ್ಯಾ ಪವಿತ್ರ ನಾಗರಾಜ್ ಪರಿಚಯವಾಗಿದೆ. ಈ ವೇಳೆ ಹೋರಾಟಗಾರ್ತಿ ಎಂದು ನಂಬಿಸಿದ್ದ ಸಂಧ್ಯಾ, ನೊಂದವರಿಗೆ, ವಂಚನೆಗೊಳಪಟ್ಟವರಿಗೆ ಸಹಾಯ ಮಾಡುತ್ತಿರುವುದಾಗಿ ತಿಳಿಸಿದ್ದರು. ರಾಜ್ಯದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಅನೇಕ ಪ್ರಕರಣ ಬಗೆಹರಿಸಿಕೊಟ್ಟಿರುವುದಾಗಿ ಸಂಧ್ಯಾ ಹೇಳಿಕೊಂಡಿದ್ದರು. ಈ ವೇಳೆ ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ರಾಜೇಶ್ ತಿಳಿಸಿದ್ದರು. ಈ ಪ್ರಕರಣವನ್ನು ಹೈಕೋರ್ಟ್ನಲ್ಲಿ ಬಗೆಹರಿಸುವುದಾಗಿ ಆಕೆ ನಂಬಿಸಿದ್ದರು. ಈ ಬಗ್ಗೆ ದಾಖಲಾತಿ ಪಡೆಯಲು 2025ರ ಜನವರಿಯಲ್ಲಿ ಬೆಂಗಳೂರಿನ ಜೆ.ಪಿನಗರದ ಮನೆಗೆ ಸಂಧ್ಯಾ ಕರೆಸಿದ್ದರು. ಬಳಿಕ ಪ್ರಕರಣ ಬಗೆಹರಿಸಲು ಸ್ವಲ್ಪ ಖರ್ಚು ಇದೆ ಎಂದಿದ್ದರು. ದೂರುದಾರ ರಾಜೇಶ್ರಿಂದ ಹಂತ ಹಂತವಾಗಿ 3.20 ಲಕ್ಷ ರೂ. ಹಣವನ್ನು ಪಡೆದಿದ್ದರು. ಬಳಿಕವೂ ಸಮಸ್ಯೆ ಬಗೆಹರಿಯದ ಕಾರಣ ಈ ಬಗ್ಗೆ ರಾಜೇಶ್ ಪ್ರಶ್ನಿಸಿದ್ದರು. ಆಗ ಸಂಧ್ಯಾ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಸಂಶಯಗೊಂಡು ವಿಚಾರಿಸಿದಾಗ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ರಾಜೇಶ್ ತಿಳಿಸಿದ್ದಾರೆ. ದೂರಿನ ಹಿನ್ನೆಲೆ BNS ಕಾಯ್ದೆಯಡಿ 318(4), 351(2) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲ್ಲೂಕಿನ ಅರಿಯಡ್ಕ ಮತ್ತು ಕೆದಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂಡಸಾಗು ಜನತಾ ಕಾಲೊನಿ, ಮಜ್ಜಾರಡ್ಕ, ಗೋಳ್ತಿಲ ವ್ಯಾಪ್ತಿಯಲ್ಲಿ ನೊಣಗಳ ಕಾಟ ಅತಿಯಾಗಿದೆ. ಆಹಾರ ತಯಾರಿಸಲು, ಸೇವಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ...
ಬೆಂಗಳೂರು, – ಲೈಸೆನ್ಸ್ ನವೀಕರಣ ಹಾಗೂ ಹೊಸ ಪರವಾನಗಿ ಶುಲ್ಕ ಕಡಿಮೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮದ್ಯ ಮಾರಾಟಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಶುಲ್ಕ ಹೆಚ್ಚಳದಿಂದ ಮದ್ಯ ಮಾರಾಟಕ್ಕೆ ತೀವ್ರ ತೊಂದರೆಯಾಗಿದೆ. ಹೀಗಾಗಿ...
ಪುತ್ತೂರು: ” ಸದಾ ಕಾಲ ತನ್ನನ್ನು ತಾನು ಸೇವೆಗೆ ಮುಡಿಪಾಗಿಟ್ಟು ಇಲಾಖಾ ಕೆಲಸಗಳಲ್ಲಿಯೂ ತೊಡಗಿಸಿಕೊಂಡು ಕ್ರೀಯಶೀಲರಾಗಿದ್ದ ಶಿಕ್ಷಕಿಯಾಗಿದ್ದ ಗಂಗಾವತಿಯವರು ತನ್ನ ಸೇವೆಯನ್ನು ಕರ್ತವ್ಯವೆಂದು ಭಾವಿಸಿದವರು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ” ಎಂದು ಸಮನ್ವಯಾಧಿಕಾರಿಗಳಾದ ನವೀನ್ ವೇಗಸ್...
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಚುನಾವಣೆಯಲ್ಲಿ ಶಾಲಾ ನಾಯಕನಾಗಿ 10 ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಪಿ ಎಸ್ ,ಉಪನಾಯಕನಾಗಿ 9ನೇ ತರಗತಿ ವಿದ್ಯಾರ್ಥಿಯಾದ...
ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಾಕುಕ್ಕು – ಕಂಜೂರು ದೈವಸ್ಥಾನದ ರಸ್ತೆಯು 20 ವರ್ಷಗಳಿಂದ ತೀರಾ ಅದೆಗೆಟ್ಟಿದ್ದು ವಾಹನಗಳ ಸಂಚಾರಕ್ಕೆ, ನಡೆದು ಕೊಂಡು ಹೋಗಲು ತೊಂದರೆಯಾಗುತ್ತಿದೆ, ಆದದ್ದರಿಂದ ಶಾಸಕರು ಕೂಡಲೇ ಈ ರಸ್ತೆಗೆ ಅನುದಾನವನ್ನು...
ಮಹಿಳೆಯೊಬ್ಬರನ್ನು ಮಠದಲ್ಲಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಮೂಡಲಗಿಯ ಶಿವಾಪುರ ಗ್ರಾಮದ ಅಡವಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿ ಅವರನ್ನು ಗ್ರಾಮದ ಹಿರಿಯರು ಮಠದಿಂದ ಹೊರಹಾಕಿದ್ದಾರೆ. ವಿಷಯ ತಿಳಿದು ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸ್ಐ ರಾಜು ಪೂಜೇರಿ...
ಪುತ್ತೂರು: ಪುತ್ತೂರು ಕೋ ಓಪರೇಟಿವ ಟೌನ್ ಬ್ಯಾಂಕ್ನ ಹಿರಿಯ ಅಧಿಕಾರಿಯಾಗಿ ಜ್ಯೋತಿ ಎನ್.ಎಸ್ ಅವರು ವಿಟ್ಲ ಶಾಖೆಯ ನೂತನ ಶಾಖಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ನಲ್ಲಿ ಕಳೆದ ಹಲವು ವರ್ಷಗಳಿಂದ ಹಿರಿಯ ಅಧಿಕಾರಿಯಾಗಿ...
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ...
ಸರ್ವೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸರ್ವೆ ರಾಘವೇಂದ್ರ ಮಠ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಸರ್ವೆ ವಲಯ ಉಸ್ತುವಾರಿ ರವೀಂದ್ರ ನೆಕ್ಕಿಲು, ಸರ್ವೆ...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಬಗ್ಗೆ ಪಡ್ನೂರು ಗ್ರಾಮಸಮಿತಿಯ ಸಭೆಯು ಮದಗ ಶ್ರೀ ಜನಾರ್ಧನ ದೇವಸ್ಥಾನ ಕುಂಜಾರು,ಪಡ್ನೂರು ಇಲ್ಲಿ ನಡೆಯಿತು. .ಸಭೆಯಲ್ಲಿ ಶಾಸಕ ಅಶೋಕ್ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಕಿಲೋಮೀಟರ್ ಸಂಖ್ಯೆ 74 ಮತ್ತು 75ರ...
ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ. 11ನೇ ಅಂತರರಾಷ್ಟ್ರೀಯ ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ...
ಕರ್ನಾಟಕದಾದ್ಯಂತ ಜೂನ್ 26ರವರೆಗೆ ಹವಾಮಾನದಲ್ಲಿ ವೈವಿಧ್ಯತೆ ಕಾಣಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಪ್ರದೇಶಗಳಲ್ಲಿ...
ಪುತ್ತೂರು; ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಹಾಗೂ ಮನೆ ದುರಸ್ಥಿ ಗೆ ಈ ಹಿಂದೆ ಸರಕಾರ ಫಲಾನುಭವಿಗಳನ್ನು ಆಯ್ಕೆ ಮಾಡಿತ್ತು. ಆಯ್ಕೆಯಾದ ಪ.ಜಾತಿ.ಪ ಪಂಗಡ,ವಿಕಲಚೇತನ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ...
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ...